'' ಕನ್ನಡ ಚಿತ್ರಗಳ ಸುದ್ದಿಗಳ ಜೊತೆಗೆ ದೈವ ಶಕ್ತಿ ಹಾಗೂ ಇತರ ಸುದ್ದಿಗಳನ್ನು ನೋಡಬಹುದು" ಈಗಲೇ ಚಾನಲ್ ನ್ನು SUBSCRIBE ಮಾಡಿ #suddinota #kannadamoviesupdate #kannada #devtional #localnews
ಹರಿವರಾಸನಂ ತಾವೇ ಬರೆದ ಅವನಿ ಎಂಬ ಕಾದಂಬರಿಯನ್ನಾಧರಿಸಿ, ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ ಚಿತ್ರ ಮಗ್ಗಿ ಪುಸ್ತಕ ಇದೀಗ ಯಶಸ್ವಿಯಾಗಿ ೫೦ ದಿನಗಳನ್ನು ಪೂರೈಸಿ ಮುನ್ನಡೆದಿದೆ, ಬಡ ಕುಟುಂಬದ ಅವನಿ ಎಂಬ ಹೆಣ್ಣು ಮಗಳ ಸುತ್ತ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಹರಿವರಾಸನಂ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಮಗ್ಗಿಪುಸ್ತಕ ಚಿತ್ರದ ಐವತ್ತರ ಸಂಭ್ರಮದ ಸಮಾರಂಭ ಮಂಗಳವಾರ ನಡೆಯಿತು, ಈ ಸಂದರ್ಭದಲ್ಲಿ ಚಿತ್ರದಲ್ಲಿ ಕೆಲಸ ಮಾಡಿ ಗೆಲುವಿಗೆ ಕಾರಣರಾದ ಕಲಾವಿದರು ಹಾಗೂ ತಂತ್ರಜ್ಞರಿಗೆ ಸ್ಮರಣಫಲಕ ನೀಡಿ ಗೌರವಿಸಲಾಯಿತು, ೪ ಆಯಾಮಗಳಲ್ಲಿ ನಡೆಯುವ ಕಥೆ ಒಳಗೊಂಡ ಈ ಚಿತ್ರದಲ್ಲಿ ಮಕ್ಕಳ ಜತೆಗೆ ಪೋಷಕರಿಗೂ ಉತ್ತಮ ಸಂದೇಶವಿದೆ. ನಿರ್ದೇಶಕ ಹರಿವರಾಸನಂ ತಮ್ಮ ಮೊದಲ ಪ್ರಯತ್ನದಲ್ಲೇ ಪ್ರೇಕ್ಷಕರ ನಾಡಿ ಮಿಡಿತವನ್ನರಿತು ಚಿತ್ರ ನಿರೂಪಿಸಿದ್ದಾರೆ. ಅವರ ಪ್ರಥಮ ಚಿತ್ರವೇ ೫೦ ದಿನಗಳನ್ನು ಪೂರೈಸಿದೆ. ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳು, ಪೋಷಕರು ಚಿತ್ರ ವೀಕ್ಷಿಸಿ ಮೆಚ್ಚಿಕೊಂಡಿದ್ದಾರೆ. ಸದ್ಯ ಈ ಚಿತ್ರ ಉತ್ತರ ಕರ್ನಾಟಕದಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿನ್ನಸ್ವಾಮಿ ಫಿಲಂಸ್ ಅಡಿ ಎತಿರಾಜ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮಗ್ಗಿ ಪುಸ್ತಕವೆಂಬುದು ಬದುಕಿನ ಲೆಕ್ಕಾಚಾರವಾಗಿದ್ದು, ಜೀವನವೇ ಒಂದು ಮಗ್ಗಿ ಪುಸ್ತಕವಿದ್ದಂತೆ, ಇದರಲ್ಲಿ ಒಳ್ಳೆಯದನ್ನು ಕೂಡಬೇಕು, ಕೆಟ್ಟದ್ದನ್ನು ಕಳೆಯಬೇಕು, ಅಜ್ಞಾನವನ್ನು ಗುಣಿಸಬೇಕು, ಜ್ಞಾನವನ್ನು ಭಾಗಿಸಬೇಕು ಎಂಬ ಸಂದೇಶವಿದೆ, ನಾಲ್ಕು ಆಯಾಮಗಳಲ್ಲಿ ನಡೆಯುವ ಹೈಪರ್ ಲಿಂಕ್ ಕಥೆಯಿದು. ವೇದಿಕೆಯಲ್ಲಿ ಮಾತನಾಡಿದ ಹರಿವರಾಸನಂ ಇಡೀ ಚಿತ್ರತಂಡದ ಪರಿಶ್ರಮವೇ ಈ ಯಶಸ್ಸಿಗೆ ಕಾರಣ. ನಮ್ಮ ಚಿತ್ರ ೧೦೦ ದಿನಗಳನ್ನೂ ಪೂರೈಸಬೇಕೆಂಬ ಆಸೆಯಿದೆ, ಚಿತ್ರವೀಗ ೧೩ ಥೇಟರ್ಗಳಲ್ಲಿ ರನ್ ಆಗುತ್ತಿದೆ. ಮುಂದಿನ ವಾರದಿಂದ ರಜೆ ಪ್ರಾರಂಭವಾಗುತ್ತಿದ್ದು, ಮತ್ತಷ್ಟು ಥೇಟರ್ಗಳು ಸೇರ್ಪಡೆಯಾಗುತ್ತಿವೆ ಎಂದು ಹೇಳಿದರು. ನಿರ್ಮಾಪಕ ಎತಿರಾಜ್ ಮಾತನಾಡುತ್ತ ನಮ್ಮ ಚಿತ್ರ ೫೦ ದಿನ ಓಡಿದ್ದೇ ಖುಷಿಯ ವಿಚಾರ, ಈ ಯಶಸ್ಸಿಗೆ ಸಹಕರಿಸಿದ ಎಲ್ಲ ತಂತ್ರಜ್ಞರು, ಕಲಾವಿದರಿಗೆ ನನ್ನ ಕೃತಜ್ಞತೆಗಳು ಎಂದು ಹೇಳಿದರು, ಸಂಗೀತ ನಿರ್ದೇಶಕ ಯಶಸ್ ನಾಚಪ್ಪ ಮಾತನಾಡುತ್ತ ೫೦ ದಿನ ಅನ್ನೋದೇ ವಿಶೇಷ. ನನ್ನ ಮೊದಲ ಚಿತ್ರವೇ ೫೦ ದಿನ ಕಂಡಿದೆ. ೭ ಹಾಡುಗಳನ್ನು ೧೭ ಜನ ಸಿಂಗರ್ಸ್ ಹಾಡಿದ್ದಾರೆ ಎಂದು ಹೇಳಿದರೆ, ಛಾಯಾಗ್ರಾಹಕ ನಂದಕುಮಾರ್ ಮಾತನಾಡುತ್ತ ಈ ಸಕ್ಸಸ್ಸಿಗೆ ಕಾರಣ ನಮ್ಮ ನಿರ್ದೇಶಕರು. ಅವರು ಚಿತ್ರಕ್ಕಾಗಿ ತುಂಬಾ ಕಷ್ಟಪಟ್ಟಿದ್ದಾರೆ. ಈಗಿನ ದಿನಗಳಲ್ಲಿ ೫೦ ದಿನ ಓಡೋದು ತುಂಬಾ ಕಮ್ಮಿ, ನನ್ನ ಇಷ್ಟು ದಿನಗಳ ಜರ್ನಿಯಲ್ಲಿ ೫೦ ದಿನ ಕಂಡ ಮೊದಲ ಚಿತ್ರವಿದು ಎಂದು ಸಂತಸ ವ್ಯಕ್ತಪಡಿಸಿದರು, ಸದ್ಯ ಪರೀಕ್ಷೆಗಳು ಮುಗಿಯುತ್ತಿದ್ದು, ಈವಾರ ಭೂಮಿಕಾ ಸೇರಿದಂತೆ ಮತ್ತಷ್ಟು ಸೆಂಟರ್ಗಳಲ್ಲಿ ಚಿತ್ರ ರಿಲೀಸಾಗುತ್ತಿದೆ, ಚಿತ್ರದ ಕಲೆಕ್ಷನ್ ಕೂಡ ಜಾಸ್ತಿಯಾಗುವ ನಿರೀಕ್ಷೆಯಿದೆ, ಅಲ್ಲದೆ ನಮ್ಮ ಚಿತ್ರದ ಓಟಿಟಿ ಹಕ್ಕನ್ನು ಅಮೆಜಾನ್ ಸಂಸ್ಥೆ ಪಡೆದಿದೆ ಎಂದೂ ನಿರ್ದೇಶಕರು ಹೇಳಿಕೊಂಡರು, ಬೆಂಗಳೂರು, ಮೈಸೂರು, ಮಂಗಳೂರು, ನಂಜನಗೂಡು, ಶ್ರೀರಂಗಪಟ್ಟಣ, ಹೆಚ್.ಡಿ.ಕೋಟೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸುಮಾರು ೮೦ಕ್ಕೂ ಹೆಚ್ಚು ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಗ್ಗಿಪುಸ್ತಕ ಚಿತ್ರದಲ್ಲಿ ಒಟ್ಟು ೭ ಹಾಡುಗಳಿದ್ದು ಎಸ್.ಎಸ್. ನಾಚಪ್ಪ ಅವರ ಸಂಗೀತ ಸಂಯೋಜನೆಯಿದೆ. ಎಂ.ಎಂ.ಕೀರವಾಣಿ ಅವರು ಚಿತ್ರದ ಹಾಡೊಂದಕ್ಕೆ ದನಿಯಾಗಿರುವುದು ವಿಶೇಷ. ಉಳಿದಂತೆ ಕನ್ನಡ ಗಾಯಕರಾದ ರಾಜೇಶ್ ಕೃಷ್ಣನ್, ವಿಜಯ ಪ್ರಕಾಶ್, ಕಂಭದ ರಂಗಯ್ಯ, ನವೀನ್ ಸಜ್ಜು, ಇಂದು ನಾಗರಾಜ್, ಗುರುರಾಜ್ ಹೊಸಕೋಟೆ, ಸೈಂಧವಿ, ವೈಕಂ ವಿಜಯಲಕ್ಷ್ಮಿ ಹಾಗೂ ರವೀಂದ್ರ ಸೊರಗಾವಿ ಸೇರಿದಂತೆ ೧೭ ಜನ ಹಾಡಿದ್ದಾರೆ. ಈ ಚಿತ್ರವನ್ನು ಎಂ.ಪಿ. ಫಿಲಂಸ್ ಮೂಲಕ ಕೆ. ಮುನೀಂದ್ರ ಅವರು ರಿಲೀಸ್ ಮಾಡಿದ್ದರು. ಅವರ ಸಂಸ್ಥೆಯಿಂದ ಬಿಡುಗಡೆಯಾದ ಮೊದಲ ೨ ಚಿತ್ರಗಳೂ ೫೦ ದಿನ ಪೂರೈಸಿರುವುದು ಸಂತಸದ ವಿಷಯ, ಈ ಕುರಿತು ಮಾತನಾಡಿದ ಮುನೀಂದ್ರ ಈ ಹಿಂದೆ ನಾವೇ ರಿಲೀಸ್ ಮಾಡಿದ ಕಂಗ್ರಾಚುಲೇಶನ್ಸ್ ಬ್ರದರ್ ಕೂಡ ೫೦ ದಿನ ಪ್ರದರ್ಶನ ಕಂಡಿತ್ತು, ಇದು ಎರಡನೇ ಚಿತ್ರ ಎಂದರು, ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ರಂಜನ್ ಕಾಸರಗೋಡು, ರಾನ್ವಿ ಶೇಖರ್, ಮಹೇಶ್, ಮೋಹಿತ್, ಮೈಸೂರು ರಮಾನಂದ್, ಮೂಗು ಸುರೇಶ್, ಪಂಕಜ, ಅಗಸ್ತ್ಯ ಅಲ್ಲದೆ ಸಂಗೀತ ನಿರ್ದೇಶಕರು, ಸಂಕಲನಕಾರರು ಹಾಗೂ ಛಾಯಾಗ್ರಾಹಕರಿಗೂ ಸಹ ಈ ವೇದಿಕೆಯಲ್ಲಿ ಸ್ಮರಣಫಲಕ ವಿತರಿಸಿ ಗೌರವಿಸಲಾಯಿತು, ಮೇಘಶ್ರೀ, ರಕ್ಷಾ ಗೌಡ, ಮಿಮಿಕ್ರಿ ಗೋಪಿ, ಚಂದ್ರಪ್ರಭ, ರಘು ರಾಮನಕೊಪ್ಪ ಹಾಗೂ ಇನ್ನಿತರರು ಚಿತ್ರದಲ್ಲಿ ನಟಿಸಿದ್ದಾರೆ.
Suddinota ಸುದ್ದಿ ನೋಟ
ಐವತ್ತರ ಸಂಭ್ರಮದಲ್ಲಿ "ಮಗ್ಗಿಪುಸ್ತಕ"
ಹರಿವರಾಸನಂ ತಾವೇ ಬರೆದ ಅವನಿ ಎಂಬ ಕಾದಂಬರಿಯನ್ನಾಧರಿಸಿ, ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ ಚಿತ್ರ ಮಗ್ಗಿ ಪುಸ್ತಕ ಇದೀಗ ಯಶಸ್ವಿಯಾಗಿ
೫೦ ದಿನಗಳನ್ನು ಪೂರೈಸಿ ಮುನ್ನಡೆದಿದೆ, ಬಡ ಕುಟುಂಬದ ಅವನಿ ಎಂಬ ಹೆಣ್ಣು ಮಗಳ ಸುತ್ತ ನಡೆಯುವ ಘಟನೆಗಳನ್ನು ಇಟ್ಟುಕೊಂಡು ಹರಿವರಾಸನಂ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಮಗ್ಗಿಪುಸ್ತಕ ಚಿತ್ರದ
ಐವತ್ತರ ಸಂಭ್ರಮದ ಸಮಾರಂಭ ಮಂಗಳವಾರ ನಡೆಯಿತು, ಈ ಸಂದರ್ಭದಲ್ಲಿ ಚಿತ್ರದಲ್ಲಿ ಕೆಲಸ ಮಾಡಿ ಗೆಲುವಿಗೆ
ಕಾರಣರಾದ ಕಲಾವಿದರು ಹಾಗೂ ತಂತ್ರಜ್ಞರಿಗೆ ಸ್ಮರಣಫಲಕ ನೀಡಿ ಗೌರವಿಸಲಾಯಿತು,
೪ ಆಯಾಮಗಳಲ್ಲಿ ನಡೆಯುವ ಕಥೆ ಒಳಗೊಂಡ ಈ ಚಿತ್ರದಲ್ಲಿ ಮಕ್ಕಳ ಜತೆಗೆ ಪೋಷಕರಿಗೂ ಉತ್ತಮ ಸಂದೇಶವಿದೆ.
ನಿರ್ದೇಶಕ ಹರಿವರಾಸನಂ ತಮ್ಮ ಮೊದಲ ಪ್ರಯತ್ನದಲ್ಲೇ ಪ್ರೇಕ್ಷಕರ ನಾಡಿ ಮಿಡಿತವನ್ನರಿತು ಚಿತ್ರ
ನಿರೂಪಿಸಿದ್ದಾರೆ. ಅವರ ಪ್ರಥಮ ಚಿತ್ರವೇ ೫೦ ದಿನಗಳನ್ನು ಪೂರೈಸಿದೆ. ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯ
ವಿದ್ಯಾರ್ಥಿಗಳು, ಪೋಷಕರು ಚಿತ್ರ ವೀಕ್ಷಿಸಿ ಮೆಚ್ಚಿಕೊಂಡಿದ್ದಾರೆ. ಸದ್ಯ ಈ ಚಿತ್ರ ಉತ್ತರ ಕರ್ನಾಟಕದಲ್ಲಿ ಭರ್ಜರಿ ಪ್ರದರ್ಶನ
ಕಾಣುತ್ತಿದೆ. ಚಿನ್ನಸ್ವಾಮಿ ಫಿಲಂಸ್ ಅಡಿ ಎತಿರಾಜ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮಗ್ಗಿ ಪುಸ್ತಕವೆಂಬುದು ಬದುಕಿನ ಲೆಕ್ಕಾಚಾರವಾಗಿದ್ದು, ಜೀವನವೇ ಒಂದು ಮಗ್ಗಿ ಪುಸ್ತಕವಿದ್ದಂತೆ, ಇದರಲ್ಲಿ ಒಳ್ಳೆಯದನ್ನು ಕೂಡಬೇಕು,
ಕೆಟ್ಟದ್ದನ್ನು ಕಳೆಯಬೇಕು, ಅಜ್ಞಾನವನ್ನು ಗುಣಿಸಬೇಕು, ಜ್ಞಾನವನ್ನು ಭಾಗಿಸಬೇಕು ಎಂಬ ಸಂದೇಶವಿದೆ, ನಾಲ್ಕು
ಆಯಾಮಗಳಲ್ಲಿ ನಡೆಯುವ ಹೈಪರ್ ಲಿಂಕ್ ಕಥೆಯಿದು.
ವೇದಿಕೆಯಲ್ಲಿ ಮಾತನಾಡಿದ ಹರಿವರಾಸನಂ ಇಡೀ ಚಿತ್ರತಂಡದ ಪರಿಶ್ರಮವೇ ಈ ಯಶಸ್ಸಿಗೆ ಕಾರಣ. ನಮ್ಮ ಚಿತ್ರ ೧೦೦
ದಿನಗಳನ್ನೂ ಪೂರೈಸಬೇಕೆಂಬ ಆಸೆಯಿದೆ, ಚಿತ್ರವೀಗ ೧೩ ಥೇಟರ್ಗಳಲ್ಲಿ ರನ್ ಆಗುತ್ತಿದೆ. ಮುಂದಿನ ವಾರದಿಂದ
ರಜೆ ಪ್ರಾರಂಭವಾಗುತ್ತಿದ್ದು, ಮತ್ತಷ್ಟು ಥೇಟರ್ಗಳು ಸೇರ್ಪಡೆಯಾಗುತ್ತಿವೆ ಎಂದು ಹೇಳಿದರು.
ನಿರ್ಮಾಪಕ ಎತಿರಾಜ್ ಮಾತನಾಡುತ್ತ ನಮ್ಮ ಚಿತ್ರ ೫೦ ದಿನ ಓಡಿದ್ದೇ ಖುಷಿಯ ವಿಚಾರ, ಈ ಯಶಸ್ಸಿಗೆ ಸಹಕರಿಸಿದ ಎಲ್ಲ
ತಂತ್ರಜ್ಞರು, ಕಲಾವಿದರಿಗೆ ನನ್ನ ಕೃತಜ್ಞತೆಗಳು ಎಂದು ಹೇಳಿದರು,
ಸಂಗೀತ ನಿರ್ದೇಶಕ ಯಶಸ್ ನಾಚಪ್ಪ ಮಾತನಾಡುತ್ತ ೫೦ ದಿನ ಅನ್ನೋದೇ ವಿಶೇಷ. ನನ್ನ ಮೊದಲ ಚಿತ್ರವೇ ೫೦ ದಿನ ಕಂಡಿದೆ. ೭ ಹಾಡುಗಳನ್ನು ೧೭ ಜನ ಸಿಂಗರ್ಸ್ ಹಾಡಿದ್ದಾರೆ ಎಂದು ಹೇಳಿದರೆ, ಛಾಯಾಗ್ರಾಹಕ ನಂದಕುಮಾರ್ ಮಾತನಾಡುತ್ತ ಈ ಸಕ್ಸಸ್ಸಿಗೆ ಕಾರಣ ನಮ್ಮ ನಿರ್ದೇಶಕರು. ಅವರು ಚಿತ್ರಕ್ಕಾಗಿ ತುಂಬಾ ಕಷ್ಟಪಟ್ಟಿದ್ದಾರೆ. ಈಗಿನ ದಿನಗಳಲ್ಲಿ ೫೦ ದಿನ
ಓಡೋದು ತುಂಬಾ ಕಮ್ಮಿ, ನನ್ನ ಇಷ್ಟು ದಿನಗಳ ಜರ್ನಿಯಲ್ಲಿ ೫೦ ದಿನ ಕಂಡ ಮೊದಲ ಚಿತ್ರವಿದು ಎಂದು ಸಂತಸ
ವ್ಯಕ್ತಪಡಿಸಿದರು, ಸದ್ಯ ಪರೀಕ್ಷೆಗಳು ಮುಗಿಯುತ್ತಿದ್ದು, ಈವಾರ ಭೂಮಿಕಾ ಸೇರಿದಂತೆ ಮತ್ತಷ್ಟು ಸೆಂಟರ್ಗಳಲ್ಲಿ
ಚಿತ್ರ ರಿಲೀಸಾಗುತ್ತಿದೆ, ಚಿತ್ರದ ಕಲೆಕ್ಷನ್ ಕೂಡ ಜಾಸ್ತಿಯಾಗುವ ನಿರೀಕ್ಷೆಯಿದೆ, ಅಲ್ಲದೆ ನಮ್ಮ ಚಿತ್ರದ ಓಟಿಟಿ ಹಕ್ಕನ್ನು
ಅಮೆಜಾನ್ ಸಂಸ್ಥೆ ಪಡೆದಿದೆ ಎಂದೂ ನಿರ್ದೇಶಕರು ಹೇಳಿಕೊಂಡರು,
ಬೆಂಗಳೂರು, ಮೈಸೂರು, ಮಂಗಳೂರು, ನಂಜನಗೂಡು, ಶ್ರೀರಂಗಪಟ್ಟಣ, ಹೆಚ್.ಡಿ.ಕೋಟೆ ಸುತ್ತಮುತ್ತಲ
ಪ್ರದೇಶಗಳಲ್ಲಿ ಸುಮಾರು ೮೦ಕ್ಕೂ ಹೆಚ್ಚು ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಮಗ್ಗಿಪುಸ್ತಕ
ಚಿತ್ರದಲ್ಲಿ ಒಟ್ಟು ೭ ಹಾಡುಗಳಿದ್ದು ಎಸ್.ಎಸ್. ನಾಚಪ್ಪ ಅವರ ಸಂಗೀತ ಸಂಯೋಜನೆಯಿದೆ. ಎಂ.ಎಂ.ಕೀರವಾಣಿ ಅವರು ಚಿತ್ರದ ಹಾಡೊಂದಕ್ಕೆ ದನಿಯಾಗಿರುವುದು ವಿಶೇಷ. ಉಳಿದಂತೆ ಕನ್ನಡ ಗಾಯಕರಾದ ರಾಜೇಶ್ ಕೃಷ್ಣನ್, ವಿಜಯ ಪ್ರಕಾಶ್,
ಕಂಭದ ರಂಗಯ್ಯ, ನವೀನ್ ಸಜ್ಜು, ಇಂದು ನಾಗರಾಜ್, ಗುರುರಾಜ್ ಹೊಸಕೋಟೆ, ಸೈಂಧವಿ, ವೈಕಂ ವಿಜಯಲಕ್ಷ್ಮಿ
ಹಾಗೂ ರವೀಂದ್ರ ಸೊರಗಾವಿ ಸೇರಿದಂತೆ ೧೭ ಜನ ಹಾಡಿದ್ದಾರೆ.
ಈ ಚಿತ್ರವನ್ನು ಎಂ.ಪಿ. ಫಿಲಂಸ್ ಮೂಲಕ ಕೆ. ಮುನೀಂದ್ರ ಅವರು ರಿಲೀಸ್ ಮಾಡಿದ್ದರು. ಅವರ ಸಂಸ್ಥೆಯಿಂದ
ಬಿಡುಗಡೆಯಾದ ಮೊದಲ ೨ ಚಿತ್ರಗಳೂ ೫೦ ದಿನ ಪೂರೈಸಿರುವುದು ಸಂತಸದ ವಿಷಯ, ಈ ಕುರಿತು ಮಾತನಾಡಿದ ಮುನೀಂದ್ರ ಈ ಹಿಂದೆ ನಾವೇ ರಿಲೀಸ್ ಮಾಡಿದ ಕಂಗ್ರಾಚುಲೇಶನ್ಸ್ ಬ್ರದರ್ ಕೂಡ ೫೦ ದಿನ ಪ್ರದರ್ಶನ ಕಂಡಿತ್ತು, ಇದು ಎರಡನೇ ಚಿತ್ರ ಎಂದರು,
ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ರಂಜನ್ ಕಾಸರಗೋಡು, ರಾನ್ವಿ ಶೇಖರ್, ಮಹೇಶ್, ಮೋಹಿತ್, ಮೈಸೂರು ರಮಾನಂದ್, ಮೂಗು ಸುರೇಶ್, ಪಂಕಜ, ಅಗಸ್ತ್ಯ ಅಲ್ಲದೆ ಸಂಗೀತ ನಿರ್ದೇಶಕರು, ಸಂಕಲನಕಾರರು ಹಾಗೂ
ಛಾಯಾಗ್ರಾಹಕರಿಗೂ ಸಹ ಈ ವೇದಿಕೆಯಲ್ಲಿ ಸ್ಮರಣಫಲಕ ವಿತರಿಸಿ ಗೌರವಿಸಲಾಯಿತು, ಮೇಘಶ್ರೀ, ರಕ್ಷಾ ಗೌಡ,
ಮಿಮಿಕ್ರಿ ಗೋಪಿ, ಚಂದ್ರಪ್ರಭ, ರಘು ರಾಮನಕೊಪ್ಪ ಹಾಗೂ ಇನ್ನಿತರರು ಚಿತ್ರದಲ್ಲಿ ನಟಿಸಿದ್ದಾರೆ.
#suddinota #kannadamovie #sandalwood
2 months ago | [YT] | 4
View 0 replies
Suddinota ಸುದ್ದಿ ನೋಟ
ಅರವಿಂದ್ ಕೌಶಿಕ್ ನಿರ್ದೇಶನದ ಹೊಸ ಚಿತ್ರ "ಕಂಟ್ರಿ ಮೇಡ್ ಭಾಗ 2" ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ "ರಿಯಲ್ ಸ್ಟಾರ್ ಉಪೇಂದ್ರ"
#CountryMadePart2 #Arvindhkaushik #Upendra #Tittlereveled #Kannadapichhar
@countrymade @aravind_kaushik @shilpa_aravind @raghav.ram.23 @surya.dop @arjunaramu @santhoshradhakrishnan9 @abhilashdwarakish @ashvvitha._.gowda @pradeep_roshan_official @shetty_suji @kuladheepak @kuldeep_jd1 @praveenekantha21 @kannada_pichhar
#suddinota #aravindkaushik #shilpaaravind #countrymade #upendra
3 months ago | [YT] | 0
View 0 replies
Suddinota ಸುದ್ದಿ ನೋಟ
ವಾಣಿಜ್ಯ ಮಂಡಳಿ ಅಧ್ಯಕ್ಷರಿಗೆ ನಿರ್ದೇಶಕ ಜೋಗಿ ಪ್ರೇಮ್ ರಿಂದ ಕನಕಪುರ ಶ್ರೀನಿವಾಸ್ ನಿರ್ಮಾಪಕನ ವಿರುದ್ಧ ದೂರು
ಇತ್ತಿಚೆಗೆ ವೇದಿಕೆಯೊಂದರಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್
#suddinota #prem #kannada
4 months ago | [YT] | 0
View 0 replies
Suddinota ಸುದ್ದಿ ನೋಟ
ಗುಮ್ಮಡಿ ನರಸಯ್ಯ ಮನೆಗೆ ಭೇಟಿ ನೀಡಿದ ಶಿವಣ್ಣ ಮತ್ತು ಗೀತಕ್ಕ #suddinota #drshivarajkumar
6 months ago | [YT] | 0
View 0 replies
Suddinota ಸುದ್ದಿ ನೋಟ
ಬಲರಾಮ ಟೈಗರ್ ವಿನೋದ್ ಪ್ರಭಾಕರ್ ರವರಿಗೆ ಹುಟ್ಟುಹಬ್ಬದ ಶುಭಾಶಯಗಳು
#HappyBirthday
#TigerVinodPrabhakar #suddinota
6 months ago | [YT] | 2
View 0 replies
Suddinota ಸುದ್ದಿ ನೋಟ
Actor Shreeram and Spoorth marrige tomorrow
#suddinota #shreeram
6 months ago | [YT] | 0
View 0 replies
Suddinota ಸುದ್ದಿ ನೋಟ
ಮುಂದಿನ ವರ್ಷ ಜನವರಿ 30ರಂದು ವಿಕ್ರಮ್ ರವಿಚಂದ್ರನ್ ಅಭಿನಯದ "ಮುದೋಳ್" ಸಿನಿಮಾ ಬಿಡುಗಡೆ..
#suddinota #vikramravichandran
6 months ago | [YT] | 0
View 0 replies
Suddinota ಸುದ್ದಿ ನೋಟ
ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ದ್ ಸಿ ಎಂ ಸಿದ್ದರಾಮಯ್ಯ ಭೇಟಿ
#suddinota #bharthivishnuvardhan #anirudh #cmsiddaramayya #Karnatakacm
9 months ago | [YT] | 0
View 0 replies
Suddinota ಸುದ್ದಿ ನೋಟ
ಕಿಚ್ಚ ಈ ಬಾರಿ Birthday ಗೆ ಸಿಗಲ್ಲ..
#suddinota #birthday #kicchasudeep #
Kiccha
9 months ago | [YT] | 0
View 0 replies
Suddinota ಸುದ್ದಿ ನೋಟ
ಡೆವಿಲ್ ಮೂವಿ ಹೀರೋಯಿನ್ " ರಚನ ರೈ "
#suddinota #rachanarai #sandalwood #kannadamovie
9 months ago | [YT] | 0
View 0 replies
Load more